Grant scheme for the education of teachers’ children:ಶಿಕ್ಷಕರ ಮಕ್ಕಳ ವ್ಯಾಸಂಗಕ್ಕೆ ಅನುದಾನ ಯೋಜನೆ, ಈ ಯೋಜನೆಗೆ ಅರ್ಜಿ ಸಲ್ಲಿಸಿವುದು ಹೇಗೆ?

Grant scheme for the education of teachers’ children:ಶಿಕ್ಷಕರ ಮಕ್ಕಳ ವ್ಯಾಸಂಗಕ್ಕೆ ಅನುದಾನ ಯೋಜನೆ, ಈ ಯೋಜನೆಗೆ ಅರ್ಜಿ ಸಲ್ಲಿಸಿವುದು ಹೇಗೆ?

Grant scheme for the education of teachers' children

Grant scheme for the education of teachers’ children:ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಕೋರ್ಸ್‌ಗಳನ್ನು ಅಧ್ಯಯನ ಮಾಡಲು ರಾಷ್ಟ್ರೀಕೃತ ಬ್ಯಾಂಕುಗಳಿಂದ ಸಾಲ ಪಡೆದ ಶಿಕ್ಷಕರು ಹಾಗೂ ಉಪನ್ಯಾಸಕರ ಮಕ್ಕಳಿಗೆ ಆರ್ಥಿಕ ನೆರವು” ಎಂಬುದು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ಒಂದು ಭಾಗವಾಗಿದೆ. ಈ ಯೋಜನೆಯನ್ನು ಸ್ನಾತಕೋತ್ತರ ಕಾರ್ಯಕ್ರಮಗಳು ಸೇರಿದಂತೆ ವೈದ್ಯಕೀಯ ಹಾಗೂ ಎಂಜಿನಿಯರಿಂಗ್‌ನಲ್ಲಿ ವೃತ್ತಿಪರ ಕೋರ್ಸ್‌ಗಳಿಗಾಗಿ ರಾಷ್ಟ್ರೀಕೃತ ಬ್ಯಾಂಕುಗಳಿಂದ ಶೈಕ್ಷಣಿಕ ಸಾಲ ಪಡೆದಿರುವಂತಹ  ಸರ್ಕಾರಿ ಹಾಗೂ ಅನುದಾನಿತ ಸಂಸ್ಥೆಗಳ ಶಿಕ್ಷಕರು ಮತ್ತು ಉಪನ್ಯಾಸಕರ ಮಕ್ಕಳಿಗೆ ಹಣಕಾಸಿನ ನೆರವು ನೀಡುತ್ತದೆ. ಶಿಕ್ಷಕರ ಮಕ್ಕಳು ವೈದ್ಯಕೀಯ, ಇಂಜಿನಿಯರಿಂಗ್, ಸ್ನಾತಕೋತ್ತರ ಪದವಿಗಳಿಗೆ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಎಷ್ಟೇ ಮೊತ್ತದ ಶೈಕ್ಷಣಿಕ ಸಾಲ ಪಡೆದಿದ್ದರು ಬ್ಯಾಂಕಿನಿಂದ ವಿಧಿಸಿದ ಬಡ್ಡಿ ಹಣಕ್ಕೆ ಗರಿಷ್ಠ ರೂ. 50,000/-ಗಳ ಧನಸಹಾಯವನ್ನು ನಿಯಮಾನುಸಾರ ಕೋರ್ಸ್ ಮುಗಿದ ವರ್ಷದಲ್ಲಿ ಮರುಪಾವತಿ ಮಾಡಲು ಅವಕಾಶ ಕಲ್ಪಿಸಿ ಕೊಡಲಾಗಿದೆ.

ಏನಿದು ಶಿಕ್ಷಕರ ಮಕ್ಕಳಿಗೆ ಅನುದಾನ ಯೋಜನೆ(Grant scheme for the education of teachers’ children) ?

“ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಕೋರ್ಸ್‌ಗಳನ್ನು ಅಧ್ಯಯನ ಮಾಡಲು ರಾಷ್ಟ್ರೀಕೃತ ಬ್ಯಾಂಕುಗಳಿಂದ ಸಾಲ ಪಡೆದ ಶಿಕ್ಷಕರು ಹಾಗೂ ಉಪನ್ಯಾಸಕರ ಮಕ್ಕಳಿಗೆ ಆರ್ಥಿಕ ನೆರವು” ಯೋಜನೆಯಡಿ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ, ಮಾಧ್ಯಮಿಕ, ಪದವಿ ಮತ್ತು ಸ್ನಾತಕೋತ್ತರ ಸಂಸ್ಥೆಗಳಲ್ಲಿ ಕೆಲಸ ಮಾಡುವ ಶಿಕ್ಷಕರು ಮತ್ತು ಉಪನ್ಯಾಸಕರ ಮಕ್ಕಳಿಗೆ ಆರ್ಥಿಕ ನೆರವು ನೀಡುವ ಗುರಿಯನ್ನು ಹೊಂದಿದೆ. ಸ್ನಾತಕೋತ್ತರ ಕೋರ್ಸ್‌ಗಳು ಸೇರಿದಂತೆ ವೈದ್ಯಕೀಯ ಹಾಗೂ ಎಂಜಿನಿಯರಿಂಗ್‌ನ ವೃತ್ತಿಪರ ಕೋರ್ಸ್‌ಗಳ ಶೈಕ್ಷಣಿಕ ಸಾಲಗಳ ಮೇಲಿನ ಬಡ್ಡಿದರಗಳನ್ನು ಭರಿಸುವ ಮೂಲಕ ಕುಟುಂಬಗಳ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡಲು ಈ ನೆರವು ಸಹಾಯ ಮಾಡುತ್ತದೆ. ಶಿಕ್ಷಕರ ಮಕ್ಕಳು ವೈದ್ಯಕೀಯ, ಇಂಜಿನಿಯರಿಂಗ್, ಸ್ನಾತಕೋತ್ತರ ಪದವಿಗಳಿಗೆ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಎಷ್ಟೇ ಮೊತ್ತದ ಶೈಕ್ಷಣಿಕ ಸಾಲ ಪಡೆದಿದ್ದರು ಬ್ಯಾಂಕಿನಿಂದ ವಿಧಿಸಿದ ಬಡ್ಡಿ ಹಣಕ್ಕೆ ಗರಿಷ್ಠ ರೂ.50,000/-ಗಳ ಧನಸಹಾಯವನ್ನು ನಿಯಮಾನುಸಾರ ಕೋರ್ಸ್ ಮುಗಿದ ವರ್ಷದಲ್ಲಿ ಮರುಪಾವತಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಇನ್ನೊಂದೆಡೆ ನವದೆಹಲಿಯಿಂದ ಶಿಕ್ಷಕರ ಮಕ್ಕಳ ಉನ್ನತ ವ್ಯಾಸಂಗದ ವೃತ್ತಿಪರ ಕೋರ್ಸ್ ಶಿಕ್ಷಣಕ್ಕೆ ರೂ. 15,000/-ಗಳ ಹೆಚ್ಚಿನ ಧನಸಹಾಯವನ್ನು ನೀಡಲಾಗುತ್ತಿದೆ. ನಿಧಿಗಳಿಂದಲೇ ಅಂತಹ ಅರ್ಜಿಗಳನ್ನು ಆಯ್ಕೆ ಮಾಡಿ ಕಳುಹಿಸಲಾಗುತ್ತದೆ.

ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯಡಿಯಲ್ಲಿ ಶಿಕ್ಷಕರಿಗೆ ನೀಡಲಾಗುತ್ತಿರುವ ಇತರೇ ಪ್ರಮುಖ ಸೌಲಭ್ಯಗಳು.

1.ಶಿಕ್ಷಕರಿಗೆ ಮತ್ತು ಅವರ ಅವಲಂಬಿತರಿಗೆ ವೈದ್ಯಕೀಯ ಧನ ಸಹಾಯ:- ಶಿಕ್ಷಕರಿಗೆ ಮತ್ತು ನಿವೃತ್ತ ಶಿಕ್ಷಕರಿಗೆ ಹಾಗೂ ಅವರ ಅವಲಂಬಿತರಿಗೆ ಖಾಯಿಲೆಯ ತೀವ್ರತೆಯನ್ನು ಆಧರಿಸಿ ಗರಿಷ್ಠ ರೂ. 1,00,000/- ಗಳ ಮಿತಿಗೊಳಪಟ್ಟು ವೈದ್ಯಕೀಯ ಧನ ಸಹಾಯವನ್ನು ನೀಡಲಾಗುತ್ತಿದೆ.

2. ಸೇವೆಯಲ್ಲಿರುವಾಗ ಮತ್ತು ನಿವೃತ್ತಿಯ ನಂತರ ಮೃತ ಹೊಂದಿದ ಶಿಕ್ಷಕರ ಕುಟುಂಬಗಳಿಗೆ ಕುಟುಂಬ ನಿರ್ವಹಣೆಗಾಗಿ ಧನ ಸಹಾಯ:- ಸರ್ಕಾರಿ ಹಾಗೂ ಅನುದಾನಿತ ಶಾಲಾ ಶಿಕ್ಷಕರು ಸೇವೆಯಲ್ಲಿರುವಾಗಲೇ / ನಿವೃತ್ತಿಯ ನಂತರ ಮೃತಪಟ್ಟಲ್ಲಿ ಅವರ ವಾರಸುದಾರರಿಗೆ ಕುಟುಂಬ ಪಿಂಚಣಿ ಮಂಜೂರಾತಿಗೆ ಮುನ್ನ ತುರ್ತು ಕುಟುಂಬ ನಿರ್ವಹಣೆಗಾಗಿ ರೂ. 10,000/-ಗಳ ಧನಸಹಾಯವನ್ನು ನೀಡಲಾಗುವುದು.

3. ಶಿಕ್ಷಕರ ಮಕ್ಕಳ ಪದವಿ ವ್ಯಾಸಂಗಕ್ಕೆ ಧನ ಸಹಾಯ:- ಶಿಕ್ಷಕರಿಗೆ ಮತ್ತು ನಿವೃತ್ತ ಶಿಕ್ಷಕರಿಗೆ PUC ಯಿಂದ ಪದವಿ ತರಗತಿಗಳಲ್ಲಿ (ಡಿಪ್ಲೊಮಾ ಸೇರಿದಂತೆ) ವ್ಯಾಸಂಗ ಮಾಡುತ್ತಿರುವ ಅವರ ಮಕ್ಕಳ ವ್ಯಾಸಂಗಕ್ಕಾಗಿ ಕೋರ್ಸುಗಳನ್ನು ಆಧರಿಸಿ ಕನಿಷ್ಠ ರೂ. 1,250/- ರಿಂದ ಗರಿಷ್ಠ ರೂ. 3,750/-ಗಳ ಧನಸಹಾಯವನ್ನು ನೀಡಲಾಗುತ್ತಿದೆ.

4. ಶಿಕ್ಷಕರ ಮತ್ತು ನಿವೃತ್ತ ಶಿಕ್ಷಕರ ಮಕ್ಕಳಿಗೆ ಪ್ರತಿಭಾ ವಿದ್ಯಾರ್ಥಿ ವೇತನ:- ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಅತೀ ಹೆಚ್ಚು ಅಂಕ ಗಳಿಸಿದಂತಹ ಶಿಕ್ಷಕರ ಮಕ್ಕಳಿಗೆ ಪ್ರತಿಭಾ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.

5. ಗುರುಭವನಗಳ ಮತ್ತು ಅತಿಥಿ ಗೃಹಗಳ ನಿರ್ಮಣಕ್ಕೆ ಅನುದಾನ:- ಶಿಕ್ಷಕರ ಸಭೆ, ಸಮಾರಂಭ ಹಾಗೂ ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸಲು ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ನಿರ್ಮಿಸುವ ಗುರುಭವನಕ್ಕೆ ಸಭಾಂಗಣದ ವಿಸ್ತೀರ್ಣವನ್ನಾಧರಿಸಿ ಕನಿಷ್ಠ ರೂ.25 ಲಕ್ಷದಿಂದ ಗರಿಷ್ಠ 35 ಲಕ್ಷ ರೂಗಳ ವರೆವಿಗೂ ಅನುದಾನವನ್ನು ಮತ್ತು ಅತಿಥಿಗೃಹಗಳ ನಿರ್ಮಾಣಕ್ಕೆ (ತಲಾ ಕೊಠಡಿಗೆ ರೂ.1,50,000/-ರಂತೆ) 10 ಕೊಠಡಿಗಳಿಗೆ ಗರಿಷ್ಠ 15 ಲಕ್ಷ ರೂಗಳ ಅನುದಾನವನ್ನು ನೀಡಲಾಗುತ್ತದೆ.

6. ಶಿಕ್ಷಕರಿಗೆ ಸುರಕ್ಷಾ ಪರಿಹಾರ ಯೋಜನೆ:- ಅಪಘಾತಗಳಿಂದಾಗಿ ಮೃತ ಹೊಂದಿದ ಸರ್ಕಾರಿ ಮತ್ತು ಅನುದಾನಿತ ಶಾಲಾ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಾಥಮಿಕ ಶಾಲಾ ಹಂತದಿಂದ ವಿಶ್ವವಿದ್ಯಾಲಯದ ಹಂತದವರೆಗಿನ ಶಿಕ್ಷಕರುಗಳಿಗೆ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ವತಿಯಿಂದ ಸುರಕ್ಷಾ ಪರಿಹಾರ ಯೋಜನೆ” ಯನ್ನು ಜಾರಿಗೆ ತರಲಾಗಿದೆ. ಈ ಯೋಜನೆಯಡಿ ಶಿಕ್ಷಕರ ಕುಟುಂಬದವರಿಗೆ ಗರಿಷ್ಠ ರೂ. 1,00,000/- ವರೆಗೆ ಪರಿಹಾರ ಧನ ನೀಡಲಾಗುತ್ತಿದೆ.

7.ಲ್ಯಾಪ್ ಟಾಪ್ ಖರೀದಿಗಾಗಿ ಬಡ್ಡಿ ರಹಿತ ಸಾಲ:- ಲ್ಯಾಪ್ ಟಾಪ್ ಖರೀದಿಗಾಗಿ ಪ್ರತಿ ತಾಲ್ಲೂಕಿನ 10 ಶಿಕ್ಷಕರುಗಳಿಗೆ ತಲಾ ರೂ. 30,000/- ಗಳ ಬಡ್ಡಿ ರಹಿತ ಸಾಲ ನೀಡಿ, ಮುಂದಿನ 10 ತಿಂಗಳಲ್ಲಿ ತಿಂಗಳಿಗೆ ರೂ. 3,000/- ದಂತೆ ಸಂಬಳದಲ್ಲಿ ಕಟಾಯಿಸಿ ಬಡ್ಡಿರಹಿತವಾಗಿ ಹಿಂಪಡೆಯಲಾಗುವುದು.

ಈ ಯೋಜನೆಯ ಅರ್ಹತಾ ಮಾನದಂಡಗಳು ಏನು?

ಸರ್ಕಾರಿ ಮತ್ತು ಅನುದಾನಿತ ಸಂಸ್ಥೆಯಲ್ಲಿ ಕೆಲಸ ಮಾಡುವ ಶಿಕ್ಷಕರು ಹಾಗೂ ಉಪನ್ಯಾಸಕರ ಪೋಷಕರು ಮತ್ತು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯಲ್ಲಿ ಆಜೀವ ಸದಸ್ಯತ್ವವನ್ನು ಹೊಂದಿರಬೇಕು.
• ಮೊದಲ ಪ್ರಯತ್ನದಲ್ಲೇ ಪ್ರತಿ ವರ್ಷ ಹಾಗೂ ಸೆಮಿಸ್ಟರ್‌ನಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಯಾಗಿರಬೇಕು.
• ಕರ್ನಾಟಕದ ಸರ್ಕಾರಿ ಮತ್ತು ಅನುದಾನಿತ ಶಾಲೆಯಲ್ಲಿ 1 ರಿಂದ 10 ನೇ ತರಗತಿಯವರೆಗೆ ಓದಿರಬೇಕು.
• ವೈದ್ಯಕೀಯ ಮತ್ತು ಎಂಜಿನಿಯರಿಂಗ್‌ನಲ್ಲಿ ವೃತ್ತಿಪರ ಶಿಕ್ಷಣವನ್ನು ಪಡೆಯಲು ರಾಷ್ಟ್ರೀಕೃತ ಬ್ಯಾಂಕಿನಿಂದ ಶೈಕ್ಷಣಿಕ ಸಾಲವನ್ನು ಪಡೆದಿರಬೇಕು.
• ಭಾರತದೊಳಗೆ ಕೋರ್ಸ್‌ಗಾಗಿ ಶೈಕ್ಷಣಿಕ ಸಾಲವನ್ನು ಪಡೆದಿರಬೇಕು.
• ವೃತ್ತಿಪರ ವೈದ್ಯಕೀಯ, ಎಂಜಿನಿಯರಿಂಗ್ ಮತ್ತು ಸ್ನಾತಕೋತ್ತರ ಕಾರ್ಯಕ್ರಮದ ಅಂತಿಮ ವರ್ಷದಲ್ಲಿರಬೇಕು.
• ಪ್ರತಿ ಕುಟುಂಬಕ್ಕೆ 1 ಮಗು ಮಾತ್ರ ಅರ್ಜಿ ಸಲ್ಲಿಸಬಹುದು.
• ನಿವೃತ್ತ ಶಿಕ್ಷಕರ ಮಕ್ಕಳು ಈ ಯೋಜನೆಗೆ ಅರ್ಹರಲ್ಲ.

ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸುವ ವಿಧಾನ  ಹೇಗೆ?

ಆಸಕ್ತ ಅಭ್ಯರ್ಥಿಗಳು ಶಿಕ್ಷಕರ ಕಲ್ಯಾಣ ನಿಧಿ ಅಧಿಕೃತ ವೆಬ್‌ಸೈಟ್ https://kstbfonline.karnataka.gov.in/ ಅಥವಾ ಸಾರ್ವಜನಿಕ ಶಿಕ್ಷಣ ಇಲಾಖೆ https://www.schooleducation.kar.nic.in ಮೂಲಕ ಉನ್ನತ ವ್ಯಾಸಂಗ ಧನಸಹಾಯಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.

1:- ಅಧಿಕೃತ ವೆಬ್‌ಸೈಟ್‌ನಿಂದ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ.
2:- ಅರ್ಜಿ ನಮೂನೆಯಲ್ಲಿ ವಿದ್ಯಾರ್ಥಿ ಹಾಗೂ ಶಿಕ್ಷಕರ ವಿವರಗಳನ್ನು ಭರ್ತಿ ಮಾಡಿ.
3:- ಅಗತ್ಯವಿರುವ ದಾಖಲೆಗಳನ್ನು (ಪ್ರಮಾಣೀಕೃತ ಅಂಕಪಟ್ಟಿಗಳು, ಸಾಲದ ವಿವರಗಳು, ಶಿಕ್ಷಕರ HRMS ಪ್ರತಿ, ಶಾಲಾ ಶಿಕ್ಷಣದ ಪುರಾವೆ, ಇತ್ಯಾದಿ) ಲಗತ್ತಿಸಿ.
4:- ನಿಯಂತ್ರಣಾಧಿಕಾರಿ ಹಾಗೂ ಸಂಬಂಧಪಟ್ಟ ಸಂಸ್ಥೆಯ ಮುಖ್ಯಸ್ಥರು ಶಿಫಾರಸು ಮಾಡಿದ ಪ್ರಸ್ತಾವನೆಯನ್ನು ಪಡೆಯಿರಿ.
5:- ಎಲ್ಲಾ ಪ್ರಮಾಣೀಕೃತ ದಾಖಲೆಗಳೊಂದಿಗೆ ಸಂಪೂರ್ಣ ಅರ್ಜಿಯನ್ನು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಕಚೇರಿಗೆ ಸಲ್ಲಿಸಿ.
6:- ಅರ್ಜಿಯನ್ನು ಸಲ್ಲಿಸಿದ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಕಚೇರಿಯಿಂದ ರಶೀದಿ ಹಾಗೂ ಸ್ವೀಕೃತಿಯನ್ನು ವಿನಂತಿಸಿ. ರಶೀದಿಯಲ್ಲಿ ಸಲ್ಲಿಕೆಯ ದಿನಾಂಕ ಮತ್ತು ಸಮಯ ಮತ್ತು ವಿಶಿಷ್ಟ ಗುರುತಿನ ಸಂಖ್ಯೆ (ಅನ್ವಯಿಸಿದರೆ) ಮುಂತಾದ ಅಗತ್ಯ ವಿವರಗಳಿವೆ ಎಂದು ಖಚಿತಪಡಿಸಿಕೊಳ್ಳಿ.

WhatsApp Group Join Now
Telegram Group Join Now