Arivu Educational Loan Schemeಗೆ ಅರ್ಜಿ ಆಹ್ವಾನ: 5 ಲಕ್ಷ ರೂ.ವರೆಗೆ ಕಡಿಮೆ ಬಡ್ಡಿ ಸಾಲ; ಅರ್ಜಿ ಸಲ್ಲಿಸುವುದು ಹೇಗೆ?
Arivu Educational Loan Scheme:ಅರಿವು ಶೈಕ್ಷಣಿಕ ಸಾಲ ಯೋಜನೆಯು ರಾಜ್ಯ ಸರ್ಕಾರದಿಂದ ಹಿಂದುಳಿದ ವರ್ಗಗಳು (ಪ್ರವರ್ಗ-1, 2ಎ, 3ಎ, 3ಬಿ) ಮತ್ತು ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ಕಡಿಮೆ ಬಡ್ಡಿದರದ ಸಾಲವನ್ನು ಒದಗಿಸುವ ಯೋಜನೆಯಾಗಿದೆ. ಈ ಯೋಜನೆಯಡಿ CET/NEET ಮೂಲಕ ಸರ್ಕಾರಿ ಕೋಟಾದಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ M.B.B.S., B.E., B.D.S., M.B.A., B.Sc. (ಕೃಷಿ, ಪಶುವೈದ್ಯಕೀಯ, ಇತ್ಯಾದಿ) ಸೇರಿದಂತೆ ಹಲವಾರು ಕೋರ್ಸ್ಗಳಿಗೆ ವರ್ಷಕ್ಕೆ ₹50,000 ರಿಂದ ₹5,00,000 ವರೆಗೆ ಸಾಲವನ್ನು ನೀಡಲಾಗುತ್ತದೆ. ಈ ಶೈಕ್ಷಣಿಕ ಸಾಲವನ್ನು ಕಾಲೇಜಿನ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುವುದು ಮತ್ತು ಕೋರ್ಸ್ ಮುಗಿದ 6 ತಿಂಗಳ ನಂತರ 4 ವರ್ಷಗಳಲ್ಲಿ ಮರುಪಾವತಿಸಬೇಕು.
ಇತ್ತೀಚಿನ ದಿನಗಳಲ್ಲಿ ಉನ್ನತ ವಿದ್ಯಾಭ್ಯಾಸ ಕೈಗೊಳ್ಳಲು ಲಕ್ಷಾಂತರ ರೂ. ಖರ್ಚು ಮಾಡಬೇಕಾಗುತ್ತದೆ. ಇದರಿಂದಾಗಿ ಅನೇಕ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸಲು ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವ ಅರಿವು ಶೈಕ್ಷಣಿಕ ಸಾಲ ಯೋಜನೆ(Arivu Educational Loan Scheme) ಯನ್ನು ಪರಿಚಯಿಸಿದೆ. ಈ ಯೋಜನೆಯಿಂದ ಯಾವ ಯಾವ ಸಮುದಾಯದ ವಿದ್ಯಾರ್ಥಿಗಳು ಸಾಲ ಪಡೆಯಬಹುದು? ಎಷ್ಟು ಸಾಲ ನೀಡಲಾಗುತ್ತದೆ? ಮರುಪಾವತಿಸುವ ವಿಧಾನ ಹೇಗೆ ಇತ್ಯಾದಿ ಮಾಹಿತಿಗಳನ್ನು ತಿಳಿಯೋಣ ಬನ್ನಿ…
ಏನಿದು ಈ ಶೈಕ್ಷಣಿಕ ಸಾಲ ಯೋಜನೆ?
ಉನ್ನತ ವ್ಯಾಸಂಗ ಕೈಗೊಳ್ಳುವ ಬಯಸುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಅರಿವು ಶೈಕ್ಷಣಿಕ ಸಾಲ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ 50,೦೦೦ ದಿಂದ 5 ಲಕ್ಷ ರೂ.ಗಳ ವರೆಗೆ ಕಡಿಮೆ ಬಡ್ಡಿದರದಲ್ಲಿ ಸಾಲವನ್ನು ನೀಡಲಾಗುತ್ತದೆ. ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಡಿಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವೈದ್ಯಕೀಯ, ಅರೆ ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಹಲವಾರು ಕೋರ್ಸ್ಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಾಲವನ್ನು ನೀಡಲಾಗುತ್ತದೆ.
ಅರಿವು ಶೈಕ್ಷಣಿಕ ಸಾಲ ಯೋಜನೆಯ(Arivu Educational Loan Scheme)ಪ್ರಯೋಜನಗಳು.
1.ಸಾಲದ ಮೊತ್ತ:- ಕೋರ್ಸ್ ಅವಧಿಯವರೆಗೆ ಪ್ರತಿ ವರ್ಷ ₹50,000/- ರಿಂದ ₹5,00,000/- ವರೆಗೆ ಸಾಲದ ಮೊತ್ತವನ್ನು ನೀಡಲಾಗುತ್ತದೆ.
2.ಸಾಲ ನವೀಕರಣ ಪ್ರಕ್ರಿಯೆ:- ಹಿಂದಿನ ವರ್ಷದಲ್ಲಿ ನಿಗಮವು ನೀಡಿದ ಸಾಲದ ಮೊತ್ತದ ಶೇಕಡ 12ರಷ್ಟನ್ನು ಆಯಾ ಜಿಲ್ಲಾ ಕಚೇರಿಯಲ್ಲಿ ನವೀಕರಿಸಿ ಮತ್ತು ಪಾವತಿಸಬಹುದಾಗಿದೆ.
3.ಸಾಲ ಮರುಪಾವತಿ:- ಕೋರ್ಸ್ ಮುಗಿದ 6 ತಿಂಗಳ ನಂತರ 2% ಸೇವಾ ಶುಲ್ಕದೊಂದಿಗೆ ಸಾಲವನ್ನು ಮರುಪಾವತಿಸಬಹುದಾಗಿದೆ ಹಾಗೂ ಕೋರ್ಸ್ ಪೂರ್ಣಗೊಂಡ 4 ತಿಂಗಳ ನಂತರ 3 ವರ್ಷಗಳಲ್ಲಿ ಮಾಸಿಕ ಕಂತುಗಳಲ್ಲಿ ಮರುಪಾವತಿ ಮಾಡಲು ಅವಕಾಶವಾಗಿದೆ.
4.ಅಭ್ಯರ್ಥಿಗಳ ಆಯ್ಕೆ:- ಈ ಕಾರ್ಯಕ್ರಮದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪ್ರವೇಶ ಪಡೆದು ವ್ಯಾಸಂಗ ಮಾಡುವ ವಿದ್ಯಾರ್ಥಿಗಳನ್ನು ಹೊರತು ಪಡಿಸಿ, ಇತರೆ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳನ್ನು ಆಯಾ ಜಿಲ್ಲೆಯ ಜಿಲ್ಲಾ ಪಂಚಾಯತ್ಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಿರುವ ಜಿಲ್ಲಾ ಆಯ್ಕೆ ಸಮಿತಿ ಮೂಲಕ ಆಯ್ಕೆ ಮಾಡುವುದು.
5.ಅರಿವು ನವೀಕರಣ:- ಈಗಾಗಲೇ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿಯಲ್ಲಿ ಸೌಲಭ್ಯ ಪಡೆದ ವಿದ್ಯಾರ್ಥಿಗಳಿಗೆ ಸದರಿ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿದ್ದಲ್ಲಿ ಮುಂದುವರೆದ ಕಂತುಗಳಿಗೆ (3,4,5ನೇ ಕಂತುಗಳು) ವಾರ್ಷಿಕ ಗರಿಷ್ಠ ರೂ.1.00ಲಕ್ಷಗಳ ವರೆಗೆ ಸಾಲವನ್ನು ಶೇ.2 ರ ಬಡ್ಡಿ ದರದಲ್ಲಿ ಸೌಲಭ್ಯ ಕಲ್ಪಿಸಲಾಗುತ್ತಿದೆ.
Arivu Educational Loan Scheme ಶೈಕ್ಷಣಿಕ ಸಾಲಕ್ಕೆ ಅರ್ಹತೆಗಳು ಏನು?
ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿರಬೇಕು. (ವಿಶ್ವಕರ್ಮ ಮತ್ತು ಇದರ ಉಪ ಸಮುದಾಯಗಳು, ಉಪ್ಪಾರ ಮತ್ತು ಇದರ ಉಪ ಸಮುದಾಯಗಳು, ಅಂಬಿಗ ಮತ್ತು ಇದರ ಉಪ ಸಮುದಾಯಗಳು ಸವಿತಾ ಮತ್ತು ಅದರ ಉಪ ಸಮುದಾಯಗಳು, ಮಡಿವಾಳ ಮತ್ತು ಅದರ ಉಪ ಸಮುದಾಯಗಳು, ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳು ಒಕ್ಕಲಿಗ ಮತ್ತು ಅದರ ಉಪ ಸಮುದಾಯಗಳು, ಲಿಂಗಾಯತ ಮತ್ತು ಅದರ ಉಪ ಸಮುದಾಯಗಳು, ಮರಾಠ ಮತ್ತು ಅದರ ಉಪ ಸಮುದಾಯಗಳು ಮತ್ತು ಮತೀಯ ಅಲ್ಪಸಂಖ್ಯಾತರು)ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ ರೂ.3.50ಲಕ್ಷಗಳ ಮಿತಿಯಲ್ಲಿರಬೇಕು.ಸಾಮಾನ್ಯ ಪ್ರವೇಶ ಪರೀಕ್ಷೆ ಮೂಲಕ(ಸಿ.ಇ.ಟಿ.) ಪ್ರವೇಶ ಪಡೆದಿರಬೇಕು.
Arivu Educational Loan Scheme ಸರ್ಕಾರದ ಮಾರ್ಗಸೂಚಿಗಳು.
• ವಿದ್ಯಾಬ್ಯಾಸ ಸಾಲವನ್ನು ಪಡೆಯಲು ಬಯಸುವ ವಿದ್ಯಾರ್ಥಿಗಳು ತಮ್ಮ ಅರ್ಜಿಗಳನ್ನು ಆನ್ಲೈನ್ ಸಾಫ್ಟ್ ವೇರ್ ಮೂಲಕ ಸಲ್ಲಿಸಬೇಕು.
• ಆಯಾ ಜಿಲ್ಲಾ ಕಛೇರಿಗಳಲ್ಲಿ ಆನ್ಲೈನ್ನಲ್ಲಿ ನವೀಕರಣ ಅರ್ಜಿಗಳನ್ನು ಸಲ್ಲಿಸುವಾಗ ಹಿಂದಿನ ವರ್ಷದಲ್ಲಿ ನಿಗಮವು ಬಿಡುಗಡೆಮಾಡಿದ ಸಾಲದ 12% ಮೊತ್ತವನ್ನು ವಿದ್ಯಾರ್ಥಿಗಳು ಪಾವತಿಸಬೇಕಾಗುತ್ತದೆ.
• ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ (ಕುಟುಂಬದ ಆದಾಯ ಮಿತಿ ರೂ. 8.00 ಲಕ್ಷಗಳನ್ನು ಮೀರಬಾರದು) ವಿದ್ಯಾರ್ಥಿಯ ಕುರಿತು ತಹಶೀಲ್ದಾರ್ ರಿಂದ ಜಾತಿ/ಆದಾಯ ಪ್ರಮಾಣೀಕರಣವನ್ನು ಸಂಸ್ಥೆಗಳು / ಕಾಲೇಜುಗಳು ಖಚಿತಪಡಿಸಿಕೊಳ್ಳಬೇಕು.
• ವಿದ್ಯಾರ್ಥಿಯ ಕುಟುಂಬದ ಆದಾಯದ ಮಿತಿ ರೂ. 8.00 ಲಕ್ಷಮೀರಬಾರದು.
• ವಿದ್ಯಾರ್ಥಿಗಳಿಗೆ ಸಾಲದ ಮೊತ್ತವನ್ನು ನಿಗಮದಿಂದ ನೇರ ನಗದು ವರ್ಗಾವಣೆಯ ಮೂಲಕ ಕಾಲೇಜಿನ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುತ್ತದೆ.
• ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಸಿ.ಇ.ಟಿ/ನೀಟ್) ಆಯ್ಕೆಯಾದ ಎಂ.ಬಿ.ಬಿ.ಎಸ್, ಎಂ.ಡಿ/ಎಂ.ಎಸ್ ಕೋರ್ಸ್ಗಳಿಗೆ ಸರ್ಕಾರಿ ಕೋಟಾದಲ್ಲಿ ಸರ್ಕಾರಿ/ಖಾಸಗಿ ಕಾಲೇಜುಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗರಿಷ್ಟ ರೂ.5.00 ಲಕ್ಷದವರೆಗೆ ಸಾಲ ನೀಡಲಾಗುವುದು.
• ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಸಿ.ಇ.ಟಿ/ನೀಟ್) ಆಯ್ಕೆಯಾದ ಬಿ.ಡಿ.ಎಸ್.ಎಂ.ಡಿ.ಎಸ್ ಕೋರ್ಸ್ಗಳಿಗೆ ಗರಿಷ್ಟ ರೂ.1.00 ಲಕ್ಷದವರೆಗೆ, ಹಾಗೂ ಬಿ.ಆಯುಷ್ ಮತ್ತು ಎಂ.ಆಯುಷ್ ಕೋರ್ಸ್ ಗಳಿಗೆ ಸರ್ಕಾರಿ ಕೋಟಾದಲ್ಲಿ ಸರ್ಕಾರಿ/ಖಾಸಗಿ ಕಾಲೇಜುಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗರಿಷ್ಟ ರೂ.50,000/- ಗಳನ್ನು ಸಾಲವಾಗಿ ನೀಡಲಾಗುವುದು.
• ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಸಿ.ಇ.ಟಿ/ನೀಟ್) ಆಯ್ಕೆಯಾದ ಅಂದರೆ ಬ್ಯಾಚುಲಾರ್ ಆಫ್ ಆರ್ಕಿಟೆಕ್ಟ/ಇಂಜಿನಿಯರಿಂಗ್/ಟೆಕ್ನಾಲಜಿ (ಬಿ.ಇ./ಬಿ.ಟೆಕ್), ಎಂ.ಟೆಕ್, ಎಂ.ಇ. ಬಿ.ಆರ್ಕ್. ಎಂ.ಆರ್ಕ್. ಕೋರ್ಸ್ಗಳಿಗೆ ಸರ್ಕಾರಿ ಕೋಟಾದಲ್ಲಿ ಸರ್ಕಾರಿ/ಖಾಸಗಿ ಕಾಲೇಜುಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕ ಮಾತ್ರ ಗರಿಷ್ಟ ರೂ.50,000/-ಗಳು ಸಾಲವಾಗಿ ನೀಡಲಾಗುವುದು.
• ಅಲ್ಲದೆ MBA,MCA, LLB ಕೋರ್ಸಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕ ಮಾತ್ರ ಗರಿಷ್ಠ ರೂ.50,000/-ಗಳನ್ನು ಸಾಲವಾಗಿ ನೀಡಲಾಗುವುದು.
• ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಸಿ.ಇ.ಟಿ/ನೀಟ್) ಆಯ್ಕೆಯಾದ ತೋಟಗಾರಿಕೆ, ಕೃಷಿ, ಡೈರಿ ತಂತ್ರಜ್ಞಾನ, ಅರಣ್ಯ, ಪಶುವೈದ್ಯಕೀಯ, ಪ್ರಾಣಿ ವಿಜ್ಞಾನ, ಆಹಾರ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ಮೀನುಗಾರಿಕೆ, ರೇಷ್ಮೆ ಕೃಷಿ, ಗೃಹ/ಸಮುದಾಯ ವಿಜ್ಞಾನ, ಆಹಾರ ಪೋಷಣೆ ಮತ್ತು ಆಹಾರ ಪದ್ಧತಿಗೆ ಸಂಬಂಧಿತ ಕೋರ್ಸ್ಗಳಿಗೆ ಸರ್ಕಾರಿ ಕೋಟಾದಲ್ಲಿ ಸರ್ಕಾರಿ/ಖಾಸಗಿ ಕಾಲೇಜುಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕ ಮಾತ್ರ ಗರಿಷ್ಟ ರೂ.50,000/-ಗಳು ಸಾಲವಾಗಿ ನೀಡಲಾಗುವುದು.
• ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಸಿ.ಇ.ಟಿ/ನೀಟ್) ಆಯ್ಕೆಯಾದ B.Pharma, M.Pharma, Pharma.D,and D.Pharma, ಕೋರ್ಸ್ಗಳಿಗೆ ಸರ್ಕಾರಿ ಕೋಟಾದಲ್ಲಿ ಸರ್ಕಾರಿ/ಖಾಸಗಿ ಕಾಲೇಜುಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕ ಮಾತ್ರ ಗರಿಷ್ಟ ರೂ.50,000/-ಗಳು ಸಾಲವಾಗಿ ನೀಡಲಾಗುವುದು.
ಯಾವ ಯಾವ ಕೋರ್ಸ್ಗಳಿಗೆ ಸಾಲ ಲಭ್ಯ?
(1) ಬಿ.ಇ., (2) ಎಂ.ಬಿ.ಬಿ.ಎಸ್., (3) ಬಿ.ಯೂ.ಎಂ.ಎಸ್., (4) ಬಿ.ಡಿ.ಎಸ್. (5) ಬಿ.ಎ.ಎಂ.ಎಸ್. (6) ಬಿ.ಎಚ್.ಎಂ.ಎಸ್. (7) ಎಂ.ಬಿ.ಎ. (8) ಎಂ.ಟೆಕ್. (9) ಎಂ.ಇ., (10) ಎಂ.ಡಿ., (11) ಪಿಹೆಚ್.ಡಿ. (12) ಬಿ.ಸಿ.ಎ./ಎಂ.ಸಿ.ಎ (13) ಎಂ.ಎಸ್. ಆಗ್ರಿಕಲ್ಚರ್ (14) ಬಿ.ಎಸ್ಸಿ. ನರ್ಸಿಂಗ್ (15) ಬಿ.ಫಾರಂ/ಎಂ.ಫಾರಂ (16) ಬಿ.ಎಸ್ಸಿ. ಪ್ಯಾರಾ ಮೆಡಿಕಲ್ (17) ಬಿ.ಎಸ್ಸಿ. ಬಯೋ ಟೆಕ್ನಾಲಜಿ (18) ಬಿ.ಟೆಕ್ (19) ಬಿ.ಪಿ.ಟಿ. (20) ಬಿ.ವಿ.ಎಸ್.ಸಿ/ಎಂ.ವಿ.ಎಸ್.ಸಿ. (21) ಬಿ.ಎನ್.ಎಂ. (22) ಬಿ.ಹೆಚ್.ಎಮ್. (23) ಎಂ.ಡಿ.ಎಸ್. (24) ಎಂ.ಎಸ್.ಡಬ್ಲ್ಯೂ (25) ಎಲ್.ಎಲ್.ಎಂ. (26) ಎಂ.ಎಫ್.ಎ. (27) ಎಂ.ಎಸ್ಸಿ. ಬಯೋ ಟೆಕ್ನಾಲಜಿ ಮತ್ತು (28) ಎಂ.ಎಸ್ಸಿ. ಎಜಿ. ಇತ್ಯಾದಿ ಕೋರ್ಸ್ಗಳು
Arivu Educational Loan Scheme ಅಗತ್ಯವಿರುವ ದಾಖಲೆಗಳು.
• ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಜಾತಿ/ಅಲ್ಪಸಂಖ್ಯಾತ ಪ್ರಮಾಣಪತ್ರ
• ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಆದಾಯ ಪ್ರಮಾಣಪತ್ರ
• ಆಧಾರ್ ಕಾರ್ಡ್ ಪ್ರತಿ (ನಿವಾಸದ ಪುರಾವೆ)
• CET ಪ್ರವೇಶ ಪತ್ರ
• NEET ಪ್ರವೇಶ ಪತ್ರ
• SSLC/10 ನೇ ತರಗತಿಯ ಅಂಕಪಟ್ಟಿ
• ಡಿಪ್ಲೋಮ/ಪಿ.ಯು.ಸಿ ಅಂಕಪಟ್ಟಿ
• ಇಂಡೆಮ್ನಿಟೀ (ನಷ್ಟ ಪರಿಹಾರ) ಬಾಂಡ್
• ವಿದ್ಯಾರ್ಥಿಯ ಸ್ವಯಂ ಘೋಷಣೆ ಪತ್ರ
• ಪೋಷಕರ ಸ್ವಯಂ ಘೋಷಣೆ ಪತ್ರ
Arivu Educational Loan Scheme ಸಾಲ ಲಭ್ಯತೆಯ ವಿವರಗಳು.
1. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (CET/NEET) ಮುಖಾಂತರ ಎಂ.ಬಿ.ಬಿ.ಎಸ್, ಎಂ.ಡಿ, ಎಂ.ಎಸ್ ಕೋರ್ಸ್ ಗಳಿಗೆ, ಸರ್ಕಾರಿ ಕೋಟಾದಲ್ಲಿ ಸರ್ಕಾರಿ/ಖಾಸಗಿ ಕಾಲೇಜು ಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ – ಗರಿಷ್ಠ 5,00,000 ರೂ.ವರೆಗೆ.
2. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಸಿ.ಇ.ಟಿ./ನೀಟ್) ಮುಖಾಂತರ ಆಯ್ಕೆಯಾದ ಬಿ. ಡಿ. ಎಸ್, ಎಂ.ಡಿ.ಎಸ್ ಕೋರ್ಸುಗಳಿಗೆ ಸರ್ಕಾರಿ ಕೋಟಾದಲ್ಲಿ ಸರ್ಕಾರಿ/ಖಾಸಗಿ ಕಾಲೇಜು ಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ – ಗರಿಷ್ಠ 1,00,000 ರೂ. ವರೆಗೆ.
3. ಬಿ.ಆಯುಷ್ ಮತ್ತು ಎಂ.ಆಯುಷ್ ಕೋರ್ಸ್ ಗಳಿಗೆ, ಸರ್ಕಾರಿ ಕೋಟಾದಲ್ಲಿ ಸರ್ಕಾರಿ/ಖಾಸಗಿ ಕಾಲೇಜು ಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ-ಗರಿಷ್ಠ 50,000 ರೂ.ವರೆಗೆ.
4. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಸಿ.ಇ.ಟಿ./ನೀಟ್) ಮುಖಾಂತರ ಆಯ್ಕೆಯಾದ ಬ್ಯಾಚುಲಾರ್ ಆಫ್ ಆರ್ಕಿಟೆಕ್ಟ/ಇಂಜಿನಿಯರಿಂಗ್/ಟೆಕ್ನಾಲಜಿ (ಬಿ.ಇ./ಬಿ.ಟೆಕ್), ಎಂ.ಟೆಕ್, ಎಂ.ಇ. ಬಿ.ಆರ್ಕ್. ಎಂ.ಆರ್ಕ್ ವ್ಯಾಸಾಂಗ ಮಾಡುತ್ತಿರುವ, ಸರ್ಕಾರಿ ಕೋಟಾದಲ್ಲಿ ಸರ್ಕಾರಿ/ಖಾಸಗಿ ಕಾಲೇಜು ಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ – ಗರಿಷ್ಠ 50,000 ರೂ.ವರೆಗೆ.
5. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಸಿ.ಇ.ಟಿ/ನೀಟ್) ಮುಖಾಂತರ ಆಯ್ಕೆಯಾದ B.Sc. in Horticulture, Agriculture, Dairy Technology, Forestry, Veterinary, Animal science, Food Technology, Bio Technology, Fisheries, Sericulture, Home/community Sciences, Food Nutrition and Dietetics, ಕೋರ್ಸ್ಗಳಿಗೆ ಸರ್ಕಾರಿ ಕೋಟಾದಲ್ಲಿ ಸರ್ಕಾರಿ/ಖಾಸಗಿ ಕಾಲೇಜುಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕ – ಗರಿಷ್ಠ 50,000/- ರೂ.ಗಳು.
6. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಸಿ.ಇ.ಟಿ/ನೀಟ್) ಮುಖಾಂತರ ಆಯ್ಕೆಯಾದ B.Pharma, M.Pharma, Pharma.D,and D.Pharma, ಕೋರ್ಸ್ಗಳಿಗೆ ಸರ್ಕಾರಿ ಕೋಟಾದಲ್ಲಿ ಸರ್ಕಾರಿ/ಖಾಸಗಿ ಕಾಲೇಜುಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕ – ಗರಿಷ್ಠ 50,000/- ರೂ.ಗಳು.
Arivu Educational Loan Scheme ಶೈಕ್ಷಣಿಕ ಸಾಲಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈ ಕೆಳಗಿನಂತಿದೆ.
01:- ಅರ್ಜಿದಾರರು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧಿಕೃತ ವೆಬ್ಸೈಟ್ https://kmdconline.karnataka.gov.in/Portal/home ಗೆ ಭೇಟಿ ನೀಡಬೇಕು.
02:- “ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ” ಕ್ಲಿಕ್ ಮಾಡಿ ಮತ್ತು “ಮೊಬೈಲ್ ಸಂಖ್ಯೆ” ಮತ್ತು “ಸಲ್ಲಿಸಿ” ಅನ್ನು ನಮೂದಿಸಿ.
03:- “ಆಧಾರ್ ಸಂಖ್ಯೆ” ಅನ್ನು ನಮೂದಿಸಿ “ಕ್ಯಾಪ್ಚಾ” ಅನ್ನು ಭರ್ತಿ ಮಾಡಿ ಮತ್ತು “ಮುಂದೆ” ಆಯ್ಕೆಮಾಡಿ.
04:- ಅರ್ಜಿದಾರರು ಅವನ/ಅವಳ ಆಧಾರ್ ಲಿಂಕ್ ಮಾಡಿದ ಮೊಬೈಲ್ ಸಂಖ್ಯೆಯಲ್ಲಿ OTP ಅನ್ನು ಪಡೆಯುತ್ತಾರೆ.
05:- “OTP” ಅನ್ನು ನಮೂದಿಸಿ ಮತ್ತು “ಮುಂದುವರಿಸಿ” ಆಯ್ಕೆಮಾಡಿ, ಅದರ ನಂತರ ಅಧಿಕೃತ ಸೂಚನೆಯನ್ನು ಅನುಮತಿಸಿ.
06:- ಆಧಾರ್ ಅನ್ನು ಪರಿಶೀಲಿಸಿದ ನಂತರ ಮತ್ತೊಮ್ಮೆ “OTP” ಅನ್ನು ಭರ್ತಿ ಮಾಡಿ ಮತ್ತು ಸಲ್ಲಿಸಿ.
07:- ಯೋಜನೆಯನ್ನು ಆಯ್ಕೆಮಾಡಿ ಮತ್ತು ತಂದೆಯ ಹೆಸರು, ಲಿಂಗ, ಅರ್ಹತೆಯ ವಿವರವನ್ನು ಭರ್ತಿ ಮಾಡಿ
08:- “ಮುಂದುವರಿಸಿ” ಮೇಲೆ ಕ್ಲಿಕ್ ಮಾಡಿ, ವಿಳಾಸದ ವಿವರವನ್ನು ಭರ್ತಿ ಮಾಡಿ ಮತ್ತು ಮತ್ತೆ “ಮುಂದುವರಿಸಿ” ಆಯ್ಕೆಮಾಡಿ.
09:- ಅಗತ್ಯವಿರುವ ದಾಖಲೆ ಪಾಸ್ಪೋರ್ಟ್ ಗಾತ್ರದ ಫೋಟೋ, ಶೈಕ್ಷಣಿಕ ದಾಖಲೆ, ಆದಾಯ ಪ್ರಮಾಣಪತ್ರ ಇತ್ಯಾದಿಗಳನ್ನು ಅಪ್ಲೋಡ್ ಮಾಡಿ.
10:- “ಮುಂದುವರಿಯಿರಿ” ಕ್ಲಿಕ್ ಮಾಡಿ ಮತ್ತು “ಅರ್ಜಿ ಸಲ್ಲಿಸಿ” ಆಯ್ಕೆಮಾಡಿ ಮತ್ತು ಅರ್ಜಿ ಐಡಿ ಪಡೆಯಿರಿ.
ನವೀಕರಣ ಸಾಲಕ್ಕಾಗಿ ಅರ್ಜಿ ಪ್ರಕ್ರಿಯೆ.
01:- ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧಿಕೃತ ವೆಬ್ಸೈಟ್ಗೆ ಹೋಗಿ.
02:- “ಅರಿವು ಶಿಕ್ಷಣ ಸಾಲ ಯೋಜನೆ” ಆಯ್ಕೆಮಾಡಿ ಮತ್ತು “ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ” ಕ್ಲಿಕ್ ಮಾಡಿ.
03:- ” ಅರಿವು ನವೀಕರಣ” ಆಯ್ಕೆಮಾಡಿ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಮತ್ತು “ಸಲ್ಲಿಸಿ”.
04:- ಅರ್ಜಿದಾರರ ವೈಯಕ್ತಿಕ, ವಿಳಾಸ ಮತ್ತು ಬ್ಯಾಂಕ್ ವಿವರಗಳನ್ನು ಹಿಂದಿನ ಅರ್ಜಿಯಿಂದ ಮೊದಲೇ ಭರ್ತಿ ಮಾಡಲಾಗುತ್ತದೆ. ಅವುಗಳನ್ನು ಮತ್ತೆ ಭರ್ತಿ ಮಾಡುವ ಅಗತ್ಯವಿಲ್ಲ.
05:- ಅಗತ್ಯವಿರುವ ದಾಖಲೆಯನ್ನು ಅಪ್ಲೋಡ್ ಮಾಡಿ ಮತ್ತು ಅರ್ಜಿಯನ್ನು ಸಲ್ಲಿಸಿ.