Bhagyalakshmi:8,521’ಭಾಗ್ಯಲಕ್ಷ್ಮಿ’ (Bhagyalakshmi) ಫಲಾನುಭವಿಗಳಿಗೆ ಶುಭಸುದ್ದಿ.

Bhagyalakshmi:8,521‘ಭಾಗ್ಯಲಕ್ಷ್ಮಿ’ (Bhagyalakshmi) ಫಲಾನುಭವಿಗಳಿಗೆ ಶುಭಸುದ್ದಿ.

Bhagyalakshmi

Bhagyalakshmi:ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಹೆಣ್ಣುಮಕ್ಕಳ ಜನನವನ್ನು ಉತ್ತೇಜಿಸಲು ರಾಜ್ಯ ಸರ್ಕಾರ 18 ವರ್ಷಗಳ ಹಿಂದೆ ರಾಜ್ಯದಲ್ಲಿ ಜಾರಿಗೊಳಿಸಿದ್ದ ‘ಭಾಗ್ಯಲಕ್ಷ್ಮಿ'(Bhagyalakshmi) ಯೋಜನೆಯ ಲಾಭವನ್ನು ಮೊದಲ ಬಾರಿಗೆ ಜಿಲ್ಲೆಯ 8,521 ಫಲಾನುಭವಿಗಳು ಪಡೆದಿದ್ದಾರೆ.

ಜಿಲ್ಲೆಯಲ್ಲಿ ಭಾಗ್ಯಲಕ್ಷ್ಮಿ(Bhagyalakshmi)2006-2007 ಸಾಲಿನಲ್ಲಿ 8,521 ಬಾಂಡ್ ಸ್ವೀಕರಿಸಲಾಗಿತ್ತು. ಈಗ 18 ವರ್ಷ ಪೂರ್ಣಗೊಂಡ ಹೆಣ್ಣು ಮಕ್ಕಳಿಗೆ ಈ ಹಣ ಪಾವತಿಸಲಾಗುತ್ತಿದೆ. 2024ರಲ್ಲಿ ಅವಧಿ ಮುಗಿದಿರುವ ಒಟ್ಟು 3,099 ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡುವ ಪ್ರಕ್ರಿಯೆ ಪ್ರಾರಂಭವಾಗಿದೆ.

‘ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯೂ ಫಲಾನುಭವಿಗಳಿಗೆ ಹಣವನ್ನು ಡಿಬಿಟಿ(DBT) ಮುಖಾಂತರ ಪಾವತಿಸಲಾಗುತ್ತದೆ, ಈಗಾಗಲೇ ಬಹುತೇಕ ಫಲಾನುಭವಿಗಳಿಗೆ ಭಾಗ್ಯಲಕ್ಷ್ಮೀ ಹಣ ಜಮೆಯಾಗಿದೆ. ಉಳಿದವರಿಗೂ ರಾಜ್ಯ ಸರ್ಕಾರವು ಹಂತ-ಹಂತವಾಗಿ ಹಣ ಸಿಗಲಿದೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನವಿನಕುಮಾರ ತಿಳಿಸಿದ್ದಾರೆ.

ಕುಟುಂಬ ಹಾಗೂ ಸಮಾಜದಲ್ಲಿ ಹೆಣ್ಣು ಮಗುವಿನ ಘನತೆ ಹೆಚ್ಚಿಸುವ ಉದ್ದೇಶದಿಂದ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಈ ಯೋಜನೆಯನ್ನು ಜಾರಿಗೊಳಿಸಿದ್ದರು. 2006-07ರಲ್ಲಿ ನೋಂದಣಿಯಾದವರಿಗೆ 18 ವರ್ಷ ಪೂರೈಸಿದ ನಂತರ ₹32.351 ದೊರೆಯಲಿದೆ. 2008ರ ಆಗಸ್ಟ್ 1ರಿಂದ 2020ರ ಮಾರ್ಚ್ ಅಂತ್ಯದವರೆಗಿನ ಅವಧಿಯಲ್ಲಿ ನೋಂದಾಯಿಸಿದವರಿಗೆ ಸಿಗುವ ಅಂದಾಜು ಮೊತ್ತವನ್ನು 1 ಲಕ್ಷಕ್ಕೆ ಏರಿಕೆ ಮಾಡಲಾಯಿತು.

2020-2021 ಭಾಗ್ಯಲಕ್ಷ್ಮಿ ಯೋಜನೆಯು ‘ಸುಕನ್ಯಾ ಸಮೃದ್ಧಿ ಯೋಜನೆ’ಯಾಗಿ ರೂಪಾಂತರಗೊಂಡಿತು. ಈ ಯೋಜನೆಯಡಿ ಖಾತೆ ತೆರೆದವರಿಗೆ 21 ವರ್ಷ ನಂತರ ₹1.27 ಲಕ್ಷ ಪಡೆದುಕೊಳ್ಳಲಿದ್ದಾರೆ.

ನೋಂದಣಿ ಮಾಡಿಸಿದ್ದ ಫಲಾನುಭವಿಗಳಿಗೆ 18 ವರ್ಷ ಪೂರ್ಣಗೊಂಡಿರುವುದರಿಂದ ಮಂಜೂರಾಗಿದೆ. ಈ ಇಲಾಖೆ ಈಗಾಗಲೇ ಫಲಾನುಭವಿಗಳಿಂದ ಅಗತ್ಯ ವ್ಯವಸ್ಥೆ ಮಾಡುತ್ತಿದೆ. ಫಲಾನುಭವಿಗಳು ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ಅಂಗನವಾಡಿ ಕೇಂದ್ರ ಮತ್ತು ಶಿಶು ಅಭಿವೃದ್ಧಿ ಅಧಿಕಾರಿಗಳನ್ನು ಸಂಪರ್ಕಿಸಬಹುದು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೆಣ್ಣು ಭ್ರೂಣ ಹತ್ಯೆ ತಡೆಯಲು, ಬಾಲ್ಯ ವಿವಾಹ ಪದ್ಧತಿ ನಿಯಂತ್ರಿಸಲು, ಹೆಣ್ಣು ಮಗುವಿನ ಶಿಕ್ಷಣ. ಲಿಂಗಾನುಪಾತ ಉತ್ತಮ ಪಡಿಸಲು, ಆರೋಗ್ಯಮಟ್ಟ ಉತ್ತಮಪಡಿಸಿ ಹೆಣ್ಣು ಮಕ್ಕಳನ್ನು ಅಭಿವೃದ್ಧಿಯತ್ತ ಕೊಂಡೊಯ್ಕಲು ಭಾಗ್ಯಲಕ್ಷ್ಮಿ ಯೋಜನೆ ಜಾರಿಗೆ ತರಲಾಗಿತ್ತು. ಬಡತನ ರೇಖೆಗಿಂತ ಕೆಳಗಿರುವ ಕುಟುಂಬದಲ್ಲಿ ಜನಸಿದ ಇಬ್ಬರು ಹೆಣ್ಣುಮಗುವಿಗೆ ಸರ್ಕಾರವು ನಿಶ್ಚಿತ ಠೇವಣಿ ಹೂಡಿ ಮಗುವಿಗೆ 18 ವರ್ಷ ಪೂರ್ಣಗೊಂಡ ನಂತರ ಬಡ್ಡಿ ಸಹಿತ ಪರಿಪಕ್ಷ ಹಣ ನೀಡುವ ಉದ್ದೇಶದಿಂದ ಯೋಜನೆ ಜಾರಿಗೋಳಿಸಲಾಗಿತ್ತು. ಇಂದು ಅದು ಸಾಕಾರವಾಗಿದೆ.

Bhagyalakshmi:ಪಾಸ್‌ಬುಕ್ ನೀಡದ 626 ಯುವತಿಯರು.

ಜಿಲ್ಲೆಯ 626 ಯುವತಿಯರು ಇಲಾಖೆಗೆ ಬ್ಯಾಂಕ್ ಪಾಸ್‌ಬುಕ್ ತಲುಪಿಸಿಲ್ಲ. ರಾಯಚೂರು ತಾಲ್ಲೂಕಿನ 16. ಮಾನ್ವಿ ತಾಲ್ಲೂಕಿನ 251, ಸಿರವಾರ ತಾಲ್ಲೂಕಿನ 22, ಸಿಂಧನೂರು ತಾಲ್ಲೂಕಿನ 62, ಲಿಂಗಸುಗೂರು ತಾಲ್ಲೂಕಿನ 55 ಹಾಗೂ ದೇವದುರ್ಗ ತಾಲ್ಲೂಕಿನ 220 ಫಲಾನುಭವಿಗಳ ಬ್ಯಾಂಕ್ ಪಾಸ್‌ಬುಕ್ ಪ್ರತಿ ಇಲಾಖೆ ಕೈಸೇರಿಲ್ಲ. ಇವರಲ್ಲಿ ರಾಯಚೂರು ಮತ್ತು ದೇವದುರ್ಗ ತಾಲ್ಲೂಕಿನವರೇ ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಅವರ ಫೋನ್ ನಂಬರ್ ಹುಡುಕಿ ಮಾಹಿತಿ ನೀಡುವ ಕೆಲಸವನ್ನು ಇಲಾಖೆ ಸಿಬ್ಬಂದಿ ಮಾಡುತ್ತಿದ್ದಾರೆ.

PDF DOWNLOAD – CLICK HERE

WhatsApp Group Join Now
Telegram Group Join Now