Karnataka Schools: ಕರ್ನಾಟಕ ರಾಜ್ಯದ ಎಲ್ಲಾ ಶಾಲೆಗಳಿಗೆ(Karnataka Schools) ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ.

Karnataka Schools: ಕರ್ನಾಟಕ ರಾಜ್ಯದ ಎಲ್ಲಾ ಶಾಲೆಗಳಿಗೆ(Karnataka Schools) ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ.

Karnataka Schools

Karnataka Schools: ಕರ್ನಾಟಕ ರಾಜ್ಯದಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕೆ ತಕ್ಕಂತೆ ಶಿಕ್ಷಣ ಇಲಾಖೆಯೂ ಆಗಾಗ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತುರುತ್ತಲೇ ಇದೆ. ಹಾಗೆಯೇ ಇದೀಗ ಅದೆತರ ಮತ್ತೊಂದು ಮಹತ್ವದ ನಿರ್ಧಾರವೊಂದನ್ನು ಶಿಕ್ಷಣ ಇಲಾಖೆ ತೆಗೆದುಕೊಂಡಿದೆ. ಹಾಗಾದ್ರೆ ಅದೇನು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ .

ಪ್ರತಿ ತಿಂಗಳಲ್ಲಿ ಒಂದು ಶನಿವಾರ ‘ಸಂಭ್ರಮದ ದಿನವನ್ನು’ ಕರ್ನಾಟಕ ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಆಚರಣೆ ಮಾಡಲು ಶಿಕ್ಷಣ ಇಲಾಖೆಯೂ ಸೂಚನೆ ನೀಡಿದೆ. ಇದರ ಉದ್ದೇಶ ಏನು ಎನ್ನುವ ಸಂಪೂರ್ಣ ಮಾಹಿತಿಯನ್ನು ನಾವು ಇಲ್ಲಿ ತಿಳಿದುಕೊಳ್ಳಬಹುದು.

ಮಕ್ಕಳನ್ನು ಚಟುವಟಿಕೆಗಳಲ್ಲಿ ಬಹುಮುಖ ತೊಡಗಿಸುವುದರ ಮೂಲಕ ನಾಗರಿಕ ಪ್ರಜ್ಞೆ ಬೆಳೆಸಲು, ವಿವಿಧ ಥೀಮ್‌ಳನ್ನು ಆಧರಿಸಿ ವಿದ್ಯಾರ್ಥಿಗಳಿಗೆ 10 ಸ್ವಯಂ ವಿವರಣಾತ್ಮಕ ಮಾದರಿ ಮತ್ತು ಶಿಕ್ಷಕರಿಗೆ ಮಾರ್ಗದರ್ಶಿ ಕೈಪಿಡಿಯನ್ನು ರಾಜ್ಯ ಶಿಕ್ಷಣ ಸಂಶೋಧನೆ ಹಾಗೂ ತರಬೇತಿ ಇಲಾಖೆಯೂ ಈಗಾಗಲೇ ನೀಡಿದೆ.

2025-26ನೇ ಶೈಕ್ಷಣಿಕ ಸಾಲಿನಲ್ಲಿ ಪ್ರತಿ ತಿಂಗಳು 3ನೇ ಶನಿವಾರ ಶಾಲಾ ಹಂತದಲ್ಲಿ ಸದರಿ ಚಟುವಟಿಕೆಗಳನ್ನು ಆಯೋಜನೆ ಮಾಡಲು ತಿಳಿಸಿದೆ. ಮಕ್ಕಳನ್ನು ಬಹುಮುಖ ಚಟುವಟಿಕೆಗಳಲ್ಲಿ ತೊಡಗಿಸುವುದರ ಮೂಲಕ ನಾಗರಿಕ ಪ್ರಜ್ಞೆಯನ್ನು ಬೆಳೆಸಲು ವಿವಿಧ ವಿಷಯಗಳಲ್ಲಿ ವಿದ್ಯಾರ್ಥಿಗಳಿಗಾಗಿ 10 ಸ್ವಯಂ ವಿವರಣಾತ್ಮಕ ಮಾಡ್ಯೂಲ್‌ಗಳನ್ನು ಮತ್ತು ಶಿಕ್ಷಕರಿಗೆ ಮಾರ್ಗದರ್ಶಿ ಕೈಪಿಡಿಗಳನ್ನು ಸಿದ್ದಪಡಿಸಲಾಗಿದೆ.
ಸಂಭ್ರಮ ಶನಿವಾರ ದಿನದಂದು ಜಿಲ್ಲಾ ಹಂತ ಹಾಗೂ ಬ್ಲಾಕ್ ಹಂತದ ಎಲ್ಲಾ ಅಧಿಕಾರಿಗಳು ಮತ್ತು ಸಿಆರ್‌ಪಿ(CRP)ಗಳು ಕಡ್ಡಾಯವಾಗಿ ಶಾಲೆಗಳಿಗೆ ಭೇಟಿ ನೀಡಿ ಅನುಪಾಲಿಸುವುದು ಮತ್ತು ಅಗತ್ಯ ಮಾರ್ಗದರ್ಶನ ನೀಡುವುದು ಕಾರ್ಯಕ್ರಮದ ಯಶಸ್ಸಿಗೆ ಪಾಲ್ಗೊಳ್ಳಬೇಕೆಂದು ಸೂಚನೆ ನೀಡಿದೆ.

ಕರ್ನಾಟಕ ರಾಜ್ಯದ ಉರ್ದು ಶಾಲೆಗಳಲ್ಲಿ ಶನಿವಾರ ಪೂರ್ಣ ದಿನ ಆಗಿದ್ದು, ಶುಕ್ರವಾರ ಅರ್ಧ ದಿನ ಶಾಲೆ ನಡೆಯುವುದರಿಂದ ಪ್ರತಿ ತಿಂಗಳ 3ನೇ ಶುಕ್ರವಾರ ‘ಬ್ಯಾಗ್‌ ರಹಿತ’ ದಿನವನ್ನಾಗಿ ಆಚರಣೆ ಮಾಡಲು ಶಿಕ್ಷಣ ಇಲಾಖೆಯೂ ಸೂಚನೆಯನ್ನು ನೀಡಿದೆ. ಹೀಗೆ ಆಗಾಗ ಮಕ್ಕಳ ಅನುಕೂಲಕ್ಕೆ ತಕ್ಕಂತೆ ಹೊಸ ಹೊಸ ಯೋಜನೆಗಳನ್ನಯ ಜಾರಿಗೊಳಿಸುತ್ತಲಿರುತ್ತದೆ.

WhatsApp Group Join Now
Telegram Group Join Now